4 ಕೋಟಿ ವೆಚ್ಚದಲ್ಲಿ ದೂಪದಕಟ್ಟೆ -ಹೊನ್ನಾಳ ರಸ್ತೆ ಅಭಿವೃದ್ಧಿಗೆ ಚಾಲನೆ
ಬ್ರಹ್ಮಾವರ, ಸೆ.12: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ 4 ಕೋಟಿ ರೂ. ಅನುದಾನದಲ್ಲಿ ಹಾರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೂಪದಕಟ್ಟೆ - ಹೊನ್ನಾಳ ರಸ್ತೆ ಅಭಿವೃದ್ಧಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರವಿವಾರ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಹಾರಾಡಿ ಗ್ರಾಪಂ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಉಪಾಧ್ಯಕ್ಷೆ ಜಯಂತಿ ಪೂಜಾರಿ, ವಾರಂಬಳ್ಳಿ ಗ್ರಾಪಂ ಅಧ್ಯಕ್ಷೆ ಗುಲಾಬಿ, ಉಪಾಧ್ಯಕ್ಷ ಸದಾನಂದ ಪೂಜಾರಿ, ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷ ರಘುರಾಮ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಉಪ್ಪೂರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಧರಣೀಶ್, ಬ್ರಹ್ಮಾವರ ತಾಪಂ ಮಾಜಿ ಸದಸ್ಯೆ ವಸಂತಿ ಬೈಕಾಡಿ ಮೊದ ಲಾದವರು ಉಪಸ್ಥಿತರಿದ್ದರು.
Next Story