ಕಾಸರಗೋಡು : ಯುವಕನ ಕೊಲೆ ಯತ್ನ; ದೂರು
ಕಾಸರಗೋಡು : ಯುವಕನೋರ್ವನ ಕೊಲೆಗೆ ಯತ್ನಿಸಿದ ಘಟನೆ ಕುಂಬಳೆ ಯಲ್ಲಿ ಸೋಮವಾರ ಸಂಜೆ ನಡೆದಿದೆ.
ಗಂಭೀರ ಗಾಯಗೊಂಡ ಆರಿಕ್ಕಾಡಿ ಕಡವತ್ ನ ಝೈನುದ್ದೀನ್ (30) ಎಂಬರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಸಂಜೆ 7 ಗಂಟೆಯ ಸುಮಾರಿಗೆ ಕೊಡ್ಯಮ್ಮೆಯಲ್ಲಿ ಕಾರಿನಲ್ಲಿ ಬಂದ ಆರೋಪಿ ಮಾರಕಾಸ್ತ್ರದಿಂದ ಇರಿದು ಪರಾರಿಯಾಗಿರುವುದಾಗಿ ತಿಳಿದುಬಂದಿದೆ.
ಕುಂಬಳೆ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
Next Story