ಕುಂದಾಪುರ: ಕಾರ್ಮಿಕ ಅದಾಲತ್ ಕಾರ್ಯಕ್ರಮ
ಕುಂದಾಪುರ, ಸೆ.15: ಕಾರ್ಮಿಕ ಇಲಾಖೆಯ ಕುಂದಾಪುರ ವೃತ್ತ ವ್ಯಾಪ್ತಿಯ ಕುಂದಾಪುರ, ಬೈಂದೂರು ತಾಲೂಕಿನ ಕಾರ್ಮಿಕರ ಅದಾಲತ್ ಸಭೆ ಯನ್ನು ಬುಧವಾರ ಕುಂದಾಪುರ ರಾಘವೇಂದ್ರ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಸಭೆಯನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಆರ್. ಕುಮಾರ್ ಮಾತನಾಡಿ, ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಹಾಗೂ ಪರಿಹಾರ ಒದಗಿಸಲು ರಾಜ್ಯಾದ್ಯಂತ ಕಾರ್ಮಿಕ ಅದಾಲತ್ ನಡೆಸಲಾಗುತ್ತಿದೆ. ಕಾರ್ಮಿಕರ ಸಮಸ್ಯೆಗಳ ಕುರಿತಂತೆ ಬಾಕಿ ಇರುವ ಅರ್ಜಿ ಗಳನ್ನು ಇತ್ಯರ್ಥ ಪಡಿಸಲಾಗುವುದು. ಕಾರ್ಮಿಕ ಇಲಾಖೆ ಕಾರ್ಮಿಕರ ಬೆನ್ನೆಲುಬಾಗಿ ಸದಾ ನಿಮ್ಮ ಸೇವೆಗೆ ಬದ್ಧವಾಗಿರುತ್ತದೆ ಎಂದು ಹೇಳಿದರು.
ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ಎಂ.ಪ್ರಸನ್ನ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕುಂದಾಪುರ, ಬೈಂದೂರು ತಾಲೂಕಿನ ಕಾರ್ಮಿಕರ ಅರ್ಜಿ, ಅಹವಾಲುಗಳನ್ನು ಸ್ವೀಕರಿಸಲಾಯಿತು. ಕಾರ್ಮಿಕ ಮುಖಂಡ ವೆಂಕಟೇಶ್ ಕೋಣಿ ಉಪಸ್ಥಿತರಿದ್ದು.
Next Story