ಬೆಳ್ತಂಗಡಿ ಸಿರಿಯನ್ ಕೆಥೊಲಿಕ್ ಸಹಕಾರಿ ಸಂಘದ ಸಿಇಒ ಜೋಸೆಫ್ ನಿಧನ
ಬೆಳ್ತಂಗಡಿ, ಸೆ.16: ಇಲ್ಲಿಯ ಸಾಂತೋಮ್ ಟವರ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಸಿರಿಯನ್ ಕೆಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಸಿ. (56) ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ವೇಳೆ ಅದೇ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಕ್ಲಿನಿಕ್ನ ವೈದ್ಯರು ಪರೀಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು,. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಇವರು ಬೆಳ್ತಂಗಡಿ ಕ್ರೈಸ್ತ ಧರ್ಮಪ್ರಾಂತ್ದ ಜ್ಞಾನ ನಿಲಯದ ಧರ್ಮೋಪದೇಶ ಕೇಂದ್ರದಲ್ಲಿ ಸುಮಾರು 10 ವರ್ಷಗಳ ಕಾಲ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ, ಬಳಿಕ ಸಿರಿಯನ್ ಕೆಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ 11 ವರ್ಷಗಳಿಂದ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.