ಸುರತ್ಕಲ್ : ಎನ್ಎಸ್ಎಸ್ ರಾಷ್ಟ್ರೀಯ ಪ್ರಶಸ್ತಿಗೆ ಬಿಂದಿಯಾ ಶೆಟ್ಟಿ ಆಯ್ಕೆ
ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ಅತ್ಯುತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಬಿಂದಿಯಾ ಎಲ್. ಶೆಟ್ಟಿ ಆಯ್ಕೆಯಾಗಿದ್ದಾರೆ.
ಸೆ. 24ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಬಿಂದಿಯಾ ಶೆಟ್ಟಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ - ಸುಜಾತ ಶೆಟ್ಟಿ ಅವರ ಪುತ್ರಿ.
ಬಿಂದಿಯಾ ಎಸೆಸೆಲ್ಸಿಯಲ್ಲಿ ಹಾಗೂ ಪಿಯುಸಿಯಲ್ಲಿ ರಾಜ್ಯದಲ್ಲೇ ಐದನೇ ಸ್ಥಾನ ಪಡೆದಿದ್ದರು. ಸದ್ಯ ಸಿಎ ವ್ಯಾಸಂಗವನ್ನೂ ಮಾಡುತ್ತಿರುವ ಆಕೆ ಅನೇಕ ಸಂಘಸಂಸ್ಥೆಗಳಿಂದಲೂ ಪ್ರಶಸ್ತಿ ಗೌರವಗಳನ್ನು ಪಡೆದಿದ್ದಾರೆ. 2019ರಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.
Next Story