ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ, ನೀವು ಯಾವ ಲೆಕ್ಕ ನಮಗೆ: ಧರ್ಮೇಂದ್ರ
ಮಂಗಳೂರಿನಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡನ ವಿವಾದಾತ್ಮಕ ಹೇಳಿಕೆ
ಮಂಗಳೂರು: ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ, ಇನ್ನು ನೀವು ಯಾವ ಲೆಕ್ಕ ನಮಗೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಮಂಗಳೂರಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮೈಸೂರಿನಲ್ಲಿ ದೇಗುಲವನ್ನು ಧ್ವಂಸ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿ ರೆಡಿ ಮಾಡಲಾಗಿದೆ. ಆದರೆ ಇತಿಹಾಸದಲ್ಲಿ ಒಂದೇ ಒಂದು ಮಸೀದಿ, ಚರ್ಚ್ ಒಡೆದದ್ದನ್ನು ತೋರಿಸಲಿ. ಅದ್ಯಾಕೆ ದೇವಸ್ಥಾನಗಳೇ ಟಾರ್ಗೆಟ್ ಆಗುತ್ತಿದೆ. ನಾವೇನು ಸುಮ್ಮನೇ ಕೂತಿದ್ದೀವಿ ಎಂದು ಭಾವಿಸಿದ್ದೀರಾ? ಎಂದು ಧರ್ಮೇಂದ್ರ ಪ್ರಶ್ನಿಸಿದರು.
ಧಾರ್ಮಿಕ ಕೇಂದ್ರಗಳ ತೆರವಿಗೆ ಅಖಿಲ ಭಾರತ ಹಿಂದೂ ಮಹಾಸಭಾ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಅವರು ತಿಳಿಸಿದರು.
Next Story