ಬಾವಿಗೆ ಹಾರಿ ಯುವಕ ಆತ್ಮಹತ್ಯೆ
ಉಪ್ಪಿನಂಗಡಿ: ಬಾವಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಳಿಯೂರು ಗ್ರಾಮದಲ್ಲಿ ಸೆ.20ರಂದು ಬೆಳಕಿಗೆ ಬಂದಿದೆ.
ಪುರಿಯಾ ನಿವಾಸಿ ಗಿರೀಶ್ (29) ಮೃತ ವ್ಯಕ್ತಿ. ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಇವರು ಇದೇ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಸೆ.19ರಂದು ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗ್ಗೆ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗ್ಗೆ ಬಾವಿಯಲ್ಲಿ ಗಿರೀಶ್ ಅವರ ಮೃತದೇಹ ಕಂಡು ಬಂದರೂ, ಮೃತದೇಹ ಮೇಲೆತ್ತಲು ಯಾರೂ ಮುಂದಾಗಲಿಲ್ಲ. ಬಳಿಕ ಹಿರೇಬಂಡಾಡಿಯ ಅಬ್ದುರ್ರಹ್ಮಾನ್ ಅಡೆಕ್ಕಲ್ ಹಾಗೂ ಕೊಯಿಲದ ಆಸೀಫ್ ಅವರು ತೆರಳಿ ಮೃತದೇಹವನ್ನು ಮೇಲೆತ್ತಿದರು ಎಂದು ತಿಳಿದುಬಂದಿದೆ.
Next Story