ವಿದ್ಯಾರ್ಥಿ ಆತ್ಮಹತ್ಯೆ
ಕೊಲ್ಲೂರು, ಸೆ.22: ಪರೀಕ್ಷೆಯ ಭೀತಿಯಿಂದ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.20ರಂದು ಸಂಜೆ ವೇಳೆ ಕೊಲ್ಲೂರು ಗ್ರಾಮದ ಬಾವಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಬಾವಡಿಯ ಚಂದ್ರ ನಾಯ್ಕ ಎಂಬವರ ಮಗ ಸುಪ್ರೀತ(22) ಎಂದು ಗುರುತಿಸಲಾಗಿದೆ. ಕುಂದಾಫುರ ವರದರಾಜ ಎಂ.ಶೆಟ್ಟಿ ಸರಕಾರಿ ಕಾಲೇಜಿನಲ್ಲಿ ಬಿಕಾಂ 2ನೇ ವರ್ಷದ ವಿದ್ಯಾರ್ಥಿಯಾಗಿದ್ದ ಸುಪ್ರೀತ, ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ.
ಕಾಲೇಜಿನ ಪರೀಕ್ಷೆಯ ಬಗ್ಗೆ ಭಯಭೀತರಾಗಿದ್ದ ಅವರು ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೋಣೆಯಲ್ಲಿ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story