ಮಣಿಪಾಲ: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಮೃತ್ಯು
ಮಣಿಪಾಲ, ಸೆ.22: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ಸುಮಾರು 45ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ.21ರಂದು ರಾತ್ರಿ ವೇಳೆ ಇಂದ್ರಾಳಿ ಹಯಗ್ರೀವನಗರ ಓವರ್ ಬ್ರಿಡ್ಜ್ ಬಳಿ ನಡೆದಿದೆ.
ಈ ವ್ಯಕ್ತಿ ರೈಲ್ವೆ ಟ್ರಾಕ್ನಲ್ಲಿ ನಡೆದುಕೊಂಡು ಹೋಗುತ್ತಿರುವ ಗೂಡ್ಸ್ ರೈಲು ಹರಿದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ರೈಲಿನ ಲೋಕೋ ಪೈಲಟ್ ನೀಡಿದ ಮಾಹಿತಿಯಂತೆ ಇಂದ್ರಾಳಿ ಸ್ಟೇಷನ್ ಮಾಸ್ಟರ್ ವಿನೋದ್ ಕುಮಾರ್ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
5.2 ಅಡಿ ಎತ್ತರ, ಗೋದಿ ಮೈಬಣ್ಣ, ಸಾದಾರಣ ಮೈಕಟ್ಟು ಹೊಂದಿರುವ ಮೃತರು, ಕಡು ಕಂದು ಬಣ್ಣದ ಗೆರೆಯುಳ್ಳ ತುಂಬು ತೋಳಿನ ಶರ್ಟ್, ಸ್ಲೇಟ್ ಬಣ್ಣದ ಪ್ಯಾಂಟ್ ಧರಿಸಿದ್ದರು. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ(ದೂ.ಸಂ.: 0820-2570328)ಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
Next Story