ಸೆ.27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಉಡುಪಿ, ಸೆ.25: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ದಿ ಸಮಿತಿ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಇವುಗಳ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ’ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ’ ಎಂಬ ಸಂದೇಶದೊಂದಿಗೆ ಸೆ.27ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಜೀವಶಾಸ್ತ್ರ ಮತ್ತು ಪರಿಸರ, ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಭಾಗವಹಿಸಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.
Next Story