Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಮೆಝಾನ್ ‘ಲೀಗಲ್ ಫೀ’ ಪ್ರಕರಣ; ಪ್ರಧಾನಿ...

ಅಮೆಝಾನ್ ‘ಲೀಗಲ್ ಫೀ’ ಪ್ರಕರಣ; ಪ್ರಧಾನಿ ಮೋದಿ ಉತ್ತರಿಸಲಿ: ಡಾ.ಅಮೀ ಯಜ್ಞಿಕ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Oct 2021 1:31 PM IST
share
ಅಮೆಝಾನ್ ‘ಲೀಗಲ್ ಫೀ’ ಪ್ರಕರಣ; ಪ್ರಧಾನಿ ಮೋದಿ ಉತ್ತರಿಸಲಿ: ಡಾ.ಅಮೀ ಯಜ್ಞಿಕ್ ಆಗ್ರಹ

ಮಂಗಳೂರು, ಅ.4: ಇ ಕಾಮರ್ಸ್ ಸಂಸ್ಥೆಯಾದ ಅಮೆಝಾನ್‌ನ ಕಾನೂನು ಸಲಹೆಗಾರರು ಭಾರತದ ಸರಕಾರದ ಅಧಿಕಾರಿಗಳಿಗೆ ನೀಡಿದ್ದಾರೆನ್ನುವ 8,546 ಕೋಟಿ ರೂ.ಗಳು ಲಂಚ ಪ್ರಕರಣವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟ ಪಡಿಸಬೇಕು ಎಂದು ಎಐಸಿಸಿ ವಕ್ತಾರೆ, ರಾಜ್ಯಸಭಾ ಸದಸ್ಯೆ ಡಾ. ಅಮೀ ಯಜ್ಞಿಕ್ ಆಗ್ರಹಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇದೊಂದು ಬಹುದೊಡ್ಡ ಹಗರಣವಾಗಿದೆ. ಈ ಹಣ ಎಲ್ಲಿಗೆ ಹೋಗುತ್ತಿದೆ. ಯಾರಿಗೆ ಹೋಗುತ್ತಿದೆ ಎಂಬುದನ್ನು ಜನತೆಗೆ ತಿಳಿಯುವ ಹಕ್ಕಿದೆ. ಸರಕಾರದ ಅಧಿಕಾರಿಗಳಿಗೆ ಈ ಹಣ ನೀಡಲಾಗಿದೆ ಎನ್ನಲಾಗಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಂದ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ತಾನು ಈಗಾಗಲೇ ಪ್ರಧಾನಿ ಸೇರಿದಂತೆ ಸರಕಾರಕ್ಕೆ ಪತ್ರವನ್ನೂ ಬರೆದಿರುವುದಾಗಿ ಹೇಳಿದರು.

ವಿದೇಶಿ ಇ ಕಾಮರ್ಸ್ ಸಂಸ್ಥೆಯೊಂದು ಸರಕಾರದ ಅಧಿಕಾರಿಗಳಿಗೆ ಲೀಗಲ್ ಫೀಯಾಗಿ ಇಷ್ಟೊಂದು ಹಣವನ್ನು ನೀಡಿದೆ ಎನ್ನುವಾಗ ಸರಕಾರದ ನೇತೃತ್ವ ವಹಿಸಿರುವ ಪ್ರಧಾನಿ ಮನ್ ಕಿ ಬಾತ್‌ನ ಮೂಲಕವಾದರೂ ವೌನ ಮುರಿಯಬೇಕು ಎಂದರು.

ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಮಾಡಿರುವ ಆಸ್ತಿಯನ್ನು ಪ್ರಸಕ್ತ ಕೇಂದ್ರ ಸರಕಾರ ಖಾಸಗಿಯರಿಗೆ ಮಾರಾಟ ಮಾಡುವುದರಲ್ಲಿ ತಲ್ಲೀನವಾಗಿದೆ. ಈ ನಡುವೆ ಸಣ್ಣ ಪುಟ್ಟ ವ್ಯಾಪಾರಸ್ಥರು ಸೇರಿದಂತೆ ಸಣ್ಣ , ಕಿರು ಹಾಗೂ ಮಧ್ಯಮ ಗಾತ್ರದ ಕೈಗಾರಿಕೆಗಳು ಬಾಗಿಲು ಮುಚ್ಚುತ್ತಿವೆ. ಕಳೆದ ಒಂದೂವರೆ ವರ್ಷದಲ್ಲಿ 14 ಕೋಟಿ ಉದ್ಯೋಗ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ. ಈ ಬಗ್ಗೆಯೂ ಕೇಂದ್ರ ಸರಕಾರ ಅಂಕಿಅಂಶಗಳನ್ನು ನೀಡುತ್ತಿಲ್ಲ. ಮಾತ್ರವಲ್ಲದೆ ಸಂಕಷ್ಟದಲ್ಲಿರುವ ಈ ಸಣ್ಣ ಉದ್ಯಮಗಳನ್ನು, ವ್ಯಾಪಾರಿಗಳಿಗೆ ಯಾವ ಹೊಸ ಯೋಜನೆಗಳನ್ನು ಜಾರಿಗೊಳಿಸಿದೆ ಎಂಬುದನ್ನೂ ತಿಳಿಸುತ್ತಿಲ್ಲ. ಆತ್ಮನಿರ್ಭರ್ ಭಾರತವೆಂದು ಹೇಳಿಕೊಂಡು ಇರುವ ಸರಕಾರಿ ಸಂಸ್ಥೆಗಳೆಲ್ಲವನ್ನೂ ಶ್ರೀಮಂತ ಉದ್ಯಮಿಗಳಿಗೆ ಮಾರಾಟ ಮಾಡಿ ಯುವ ಜನಾಂಗವನ್ನು ಉದ್ಯೋಗ ವಂಚಿತರನ್ನಾಗಿಸಿ, ಮುಂದಿನ ಜನಾಂಗಕ್ಕೆ ಸರಕಾರ ಏನನ್ನು ಉಳಿಸುತ್ತಿದೆ ಎಂದು ಅವರು ಪ್ರಶ್ನಿಸಿದರು.

ಸಾಮಾನ್ಯ ಜನರು ಸಂಕಷ್ಟ ಪಡುತ್ತಿದ್ದಾರೆ, ಉದ್ಯಮಗಳು ನಷ್ಟವಾಗುತ್ತಿದ್ದರೂ ಬಿಜೆಪಿಯನ್ನು ಜನರು ಬೆಂಬಲಿಸಲು ಕಾರಣವೇನೆಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಾ. ಅಮೀ ಯಜ್ಞಿಕ್, ಸತ್ಯವನ್ನು ಹೆಚ್ಚುದಿನಗಳ ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಒಂದು ದಿನ ಸತ್ಯ ಹೊರಬರಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಪಿ.ವಿ. ಮೋಹನ್, ಸದಾಶಿವ ಉಳ್ಳಾಲ್, ಜೋಕಿಂ ಡಿಸೋಜ, ಆರಿಫ್ ಬಾವಾ, ನೀರಜ್ ಪಾಲ್, ಗಣೇಶ್ ಪೂಜಾರಿ, ಶುಭೋದಯ ಆಳ್ವ, ಲಾರೆನ್ಸ್ ಡಿಸೋಜ, ಟಿ.ಕೆ. ಸುಧೀರ್, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X