ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿ
ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿ ಅವರನ್ನು ನೇಮಿಸಲಾಗಿದೆ. ಹಾಲಿ ಅಧ್ಯಕ್ಷ ಕೆ. ಶ್ರೀಕಾಂತ್ ರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ.
ರವೀಶ ತಂತ್ರಿ ಬಿಜೆಪಿ ರಾಜ್ಯ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಬಿಜೆಪಿ ರಾಜ್ಯ ಸಮಿತಿಯಲ್ಲಿ ಬದಲಾವಣೆ ತಂದಿದ್ದು, ಇದರಂತೆ ಕಾಸರಗೋಡು ಜಿಲ್ಲಾಧ್ಯಕ್ಷರನ್ನು ಬದಲಾಯಿಸಿದೆ.
ಈ ಹಿಂದೆ ಮಂಜೇಶ್ವರ, ಕಾಸರಗೋಡು ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದ ರವೀಶ ತಂತ್ರಿ, ಸಾಮಾಜಿಕ, ಧಾರ್ಮಿಕ, ರಾಜಕೀಯ ವಲಯಗಳಲ್ಲಿ ಸಕ್ರಿಯರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story