ಪ್ರವಾದಿ ನಿಂದಕರ ವಿರುದ್ಧ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲು
ಬೆಳ್ತಂಗಡಿ; ಗಂಗೊಳ್ಳಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಹಿಂದೂ ಜಾಗರಣ ವೇದಿಕೆ ಇದರ ಕಾರ್ಯಕರ್ತರು ಪ್ರವಾದಿ ಮುಹಮ್ಮದ್ (ಸ.ಅ) ಅವರನ್ನು ನಿಂದಿಸಿ ಹಾಗೂ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಸಮಿತಿ ವತಿಯಿಂದ ಧರ್ಮಸ್ಥಳ, ಬೆಳ್ತಂಗಡಿ, ವೇಣೂರು, ಪೂಂಜಲ್ ಕಟ್ಟೆ ಠಾಣೆಗಳಲ್ಲಿ ದೂರು ದಾಖಲಿಸಲಾಯಿತು.
Next Story