ಶಿರೂರು ಗ್ರೀನ್ವ್ಯಾಲಿ ಶಿಕ್ಷಣ ಸಂಸ್ಥೆಗೆ ಸಚಿವ ಬಿ.ಸಿ.ನಾಗೇಶ ಭೇಟಿ
ಬೈಂದೂರು, ಅ.6: ಶಿರೂರು ಪ್ರತಿಷ್ಠಿತ ಗ್ರೀನ್ವ್ಯಾಲಿ ನ್ಯಾಷನಲ್ ಸ್ಕೂಲ್ ಶಿಕ್ಷಣ ಸಂಸ್ಥೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬುಧವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದಲ್ಲಿ ಅಂತಾ ರಾಷ್ಟ್ರಿಯ ಗುಣಮಟ್ಟದ ಶಿಕ್ಷಣ ಸಂಸ್ಥೆಯನ್ನು ಆರಂಭಿಸುವ ಮೂಲಕ ಇಲ್ಲಿನ ಶಿಕ್ಷಣಾಭಿಮಾನಿಗಳ ಕೊಡುಗೆ ಶ್ಲಾಘನೀಯ. ಉತ್ತಮ ಶೈಕ್ಷಣಿಕ ವಾತಾವರಣ ದೊರೆತಾಗ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯವಾ ಗುತ್ತದೆ ಎಂದು ತಿಳಿಸಿದರು.
ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಸಚಿವರ ಆಪ್ತ ಕಾರ್ಯದರ್ಶಿ ರವಿ, ಜಿಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ, ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ, ಮಾಜಿ ತಾಪಂ ಸದಸ್ಯ ಪುಷ್ಪರಾಜ್ ಶೆಟ್ಟಿ, ಪ್ರಾಂಶುಪಾಲ ಜಾನ್ ಮ್ಯಾಥ್ಯೂ, ಉಪಪ್ರಾಂಶುಪಾಲೆ ವಿಲೇಮಿನ್ ಮ್ಯಾಥ್ಯೂ ಮೊದಲಾದ ವರು ಉಪಸ್ಥಿತರಿದ್ದರು.
Next Story