ತೊಡಿಕಾನ : ಜಾತಿ ನಿಂದನೆ, ಹಲ್ಲೆ ಆರೋಪ; ದೂರು
ಸುಳ್ಯ: ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಕೃಷ್ಣ ಎನ್ ಎಂಬವರಿಗೆ ತೊಡಿಕಾನ ನಿವಾಸಿಗಳಾದ ಪ್ರದೀಪ್ ಮತ್ತು ದಾಮೋದರ ಎಂಬವರು ಜಾತಿ ನಿಂದನೆ ಮಾಡಿ, ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರ ದಾಖಲಾಗಿದೆ.
ಹಲ್ಲೆಗೊಳಗಾದ ಯುವಕ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ದೂರು ನೀಡಿದ ಮೇರೆಗೆ ಸುಳ್ಯ ಪೊಲೀಸ್ ಠಾಣೆಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಹಾಗೂ ತಾಲೂಕು ಅಧ್ಯಕ್ಷ ಮೋಹನ್ ಕುಮಾರ್ ಅಡ್ಕಬಳೆ ಪೊಲೀಸ್ ಠಾಣೆಗೆ ತೆರಳಿ, ಹಲ್ಲೆ ಮಾಡಿದರವ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ ಮೇಲೆ ಸುಳ್ಯ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
Next Story