ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ
ಶಿರ್ವ, ಅ.11: ನಡಿಬೆಟ್ಟು ಅಣೆಕಟ್ಟು ಬಳಿ ರವಿವಾರ ಸಂಜೆ ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ಮಟ್ಟಾರು ನಿವಾಸಿ ದಿಲೀಪ್ (30) ಎಂಬವರ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ.
ಇವರು ಗಾಳ ಹಾಕಿ ಮೀನು ಹಿಡಿಯಲು ಹೋಗಿ ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್ ಎನ್. ನೇತೃತ್ವದ ಸಿಬ್ಬಂದಿ ಹಾಗೂ ಮಲ್ಪೆಯ ಮಳುಗು ತಜ್ಞ ಈಶ್ವರ್ ಕಾರ್ಯಾಚರಣೆ ನಡೆಸಿ, ಮೃತದೇಹ ಪತ್ತೆ ಹಚ್ಚಿದ್ದಾರೆ. ದಿಲೀಪ್ ದೈವ ನರ್ತಕರಾಗಿದ್ದರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story