ಮಿತ್ತೂರು: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ; ಸವಾರ ಸಾವು
ಬಂಟ್ವಾಳ, ಅ.12: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ತಾಲೂಕಿನ ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರಿನ ಕಮ್ಯುನಿಟಿ ಹಾಲ್ ಬಳಿ ಮಂಗಳವಾರ ಸಂಭವಿಸಿದೆ.
ಇಲ್ಲಿನ ನಿಡ್ಪಳ್ಳಿ ನಿವಾಸಿ ಸುರೇಶ್ ನಯ್ಕ ಆರ್.(43) ಮೃತಪಟ್ಟವರು. ಅವರು ಖಾಸಗಿ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆಂದು ತಿಳಿದು ಬಂದಿದೆ.
ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಅಪರಿಚಿತ ವಾಹನ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಘಟನೆಯಿಂದ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನದ ಸವಾರನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾರೆಂದು ದೃಢಪಡಿಸಿದರೆನ್ನಲಾಗಿದೆ.
ಗಾಯಾಳುವನ್ನು ನೋಡಿದ ವ್ಯಕ್ತಿ ವಿಟ್ಲ ಠಾಣೆಗೆ ದೂರು ತಿಳಿಸಿದ್ದಾರೆ. ಅಪಘಾತ ನಡೆಸಿ ಚಿಕಿತ್ಸೆಯನ್ನು ಕೊಡದೆ ವಾಹನ ಸಹಿತ ಪಲಾಯನ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story