ಕಡಿಮೆ ಅಂಕದ ಚಿಂತೆ: ವಿದ್ಯಾರ್ಥಿ ಆತ್ಮಹತ್ಯೆ
ಅಜೆಕಾರು, ಅ.12: ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ಲಾಲು ಗ್ರಾಮ ಚಿಮುಳ್ಳು ಎಂಬಲ್ಲಿ ಅ.11ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಚಿಮುಳ್ಳು ನಿವಾಸಿ ರಮೇಶ್ ರಾವ್ ಎಂಬವರ ಮಗ ಶಬರೀಶ್ (21) ಎಂದು ಗುರುತಿಸಲಾಗಿದೆ.
ಇವರು ಕಾರ್ಕಳದ ಎಂಪಿಎಂ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮನೆಯಲ್ಲಿ ಬೇಸರಗೊಂಡು ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾಗಿ ದ್ದರು. ಇದೇ ಚಿಂತೆಯಲ್ಲಿ ಅವರು ಮನೆಯಲ್ಲಿ ವಿಷ ಶಿರ್ಲಾಲು ಗ್ರಾಮ ಚಿಮುಳ್ಳು ಎಂಬಲ್ಲಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story