ಮತಾಂತರ ಆರೋಪ: ಆರೋಪಿಗಳಿಗೆ ಜಾಮೀನು
ಕುಂದಾಪುರ, ಅ.16: ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತಾಂತರ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಆರೋಪಿಗಳಾದ ಕುಂದಾಪುರ ಹಳ್ಳಾಡಿ ಹರ್ಕಾಡಿ ನಿವಾಸಿ ಜ್ಯೋತಿ ಪ್ರಕಾಶ್, ರವಿ, ಮನೋಹರ್, ಪ್ರಕಾಶ್ ಕುಂದರ್ ಎಂಬವರಿಗೆ ಕುಂದಾಪುರ ಪ್ರಥಮ ದರ್ಜೆ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಇತ್ತೀಚೆಗೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ.
ಆರೋಪಿಗಳ ಪರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ವಕೀಲರು, ರಾಜಕೀಯ ದುರುದ್ದೇಶದಿಂದ ಆರೋಪಿಗಳ ಮೇಲೆ ಸುಳ್ಳು ದೂರು ದಾಖಲಾಗಿದೆ ಎಂದು ವಾದ ಮಂಡಿಸಿದ್ದರು. ಜಾಮೀನು ಅರ್ಜಿ ಪುರಸ್ಕರಿಸಿದ್ದ ಕುಂದಾಪುರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಆರೋಪಿಗಳ ಪರ ಉಡುಪಿ ಯುವ ನ್ಯಾಯವಾದಿಗಳಾದ ಅಸದುಲ್ಲಾ ಕಟಪಾಡಿ, ಪ್ರದೀಪ್ ಪಿ.ಜೆ. ಮತ್ತು ಆದಿತ್ಯ ಬೈಲೂರು ಜಾಮೀನು ಅರ್ಜಿ ಸಲ್ಲಿಸಿದ್ದರು.
Next Story