ಪಂಪ್ವೆಲ್ ನಲ್ಲಿ ಯುವಕನ ಕೊಲೆ ಪ್ರಕರಣ: ನಾಲ್ವರು ವಶಕ್ಕೆ
ಮಂಗಳೂರು, ಅ.17: ನಗರದ ಪಂಪ್ವೆಲ್ ನ ಲಾಡ್ಜ್ನಲ್ಲಿ ಯುವಕನೊಬ್ಬನ ಕೊಲೆ ಪ್ರಕರಣದ ಪ್ರಧಾನ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸುರತ್ಕಲ್ ನಿವಾಸಿ ಜೇಸನ್ (25) ವಶಕ್ಕೆ ಪಡೆದ ಆರೋಪಿ. ಈ ಪ್ರಕರಣದಲ್ಲಿ ಪಚ್ಚನಾಡಿ ನಿವಾಸಿ ಧನುಷ್ (20) ಮೃತಪಟ್ಟಿದ್ದಾನೆ.
ಲಾಡ್ಜ್ ನಲ್ಲಿ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ ಮತ್ತು ಪ್ರಜ್ವಲ್ ಎಂಬವರು ಶುಕ್ರವಾರ ರಾತ್ರಿ ಪಾರ್ಟಿ ಮಾಡುತ್ತಿದ್ದರು. ಶನಿವಾರ ಮುಂಜಾನೆ 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಈ ವೇಳೆ ಜೇಸನ್ ಹರಿತವಾದ ಆಯುಧದಿಂದ ಧನುಷ್ಗೆ ಚುಚ್ಚಿದ್ದಾನೆ. ಇದರಿಂದ ಧನುಷ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದೆಗ ಮೃತಪಟ್ಟಿದ್ದ ಎಂದು ದೂರಲಾಗಿದೆ.
ನಾಲ್ವರು ವಶಕ್ಕೆ: ಈ ಪ್ರಕರಣಕ್ಕೆ ಸಂಬಂಧಿಸಿ ಜೇಸನ್ ಸೇರಿದಂತೆ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದರು. ಇನ್ನೊಬ್ಬ ಆರೋಪಿಗೆ ಶೋಧ ಮುಂದುವರಿದಿದೆ.
Next Story