ಪುತ್ತೂರಿನಲ್ಲಿ ಮೀಲಾದ್ ಸಮಾವೇಶ
ಪುತ್ತೂರು : ದ.ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಮೀಲಾದುನ್ನಬಿ ಸಮಿತಿ ಪುತ್ತೂರು ತಾಲೂಕು ಇವುಗಳ ಜಂಟಿ ಆಶ್ರಯದಲ್ಲಿ ಬೃಹತ್ ಮೀಲಾದ್ ಸಮಾವೇಶ ಮಂಗಳವಾರ ರಾತ್ರಿ ಪುತ್ತೂರಿನ ಪುರಭವನದಲ್ಲಿ ನಡೆಯಿತು.
ಪುತ್ತೂರು ಕೇಂದ್ರ ಜುಮಾ ಮಸೀದಿಯ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ದುವಾ ನೆರವೇರಿಸಿದರು. ಬನ್ನೂರು ಮಸೀದಿ ಮುದರ್ರಿಸ್ ಕೆ.ಪಿ. ಸಿರಾಜುದ್ದೀನ್ ಸಖಾಫಿ ಉದ್ಘಾಟಿಸಿದರು. ದ.ಕ.ಜಿಲ್ಲಾ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಅಧ್ಯಕ್ಷತೆ ವಹಿಸಿದ್ದರು. ಕೆರಳದ ಅಬ್ದುಲ್ಲಾ ಸಲೀಂ ವಾಫಿ ಮುಖ್ಯ ಪ್ರಭಾಷಣ ನೀಡಿದರು.
ಹಲವಾರು ಧಾರ್ಮಿಕ ಮತ್ತು ಸಾಮಾಜಿಕ ಗಣ್ಯರು, ವಿವಿಧ ಮಸೀದಿಗಳ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Next Story