ಉಳ್ಳಾಲ ಚೂರಿ ಇರಿತ ಪ್ರಕರಣ: ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
ಉಳ್ಳಾಲ, ಅ.20: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಉಳ್ಳಾಲದಲ್ಲಿ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ.
ಬಂಧಿತ ಅಪ್ರಾಪ್ತ ವಯಸ್ಸಿನ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಉಳ್ಳಾಲದಲ್ಲಿ ಗ್ಯಾಸ್ ಸ್ಟವ್ ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾಗಿರುವವರು. ಆರೋಪಿಯು ಈ ಹಿಂದೆ ಹರೀಶ್ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಗಲಾಟೆ ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ ಹರೀಶ್ ಗಾಣಿಗ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಆರೋಪಿ ಮಂಗಳವಾರ ಹರೀಶ್ ರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದನು. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಮಂಗಳವಾರ ರಾತ್ರಿ ಮೋಗವೀರ ಪಟ್ಟಣದಲ್ಲಿ ಬಂಧಿಸಿದ್ದಾರೆ.
Next Story