ನ.8: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ
ಮಂಗಳೂರು, ಅ.21: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ನ.8ರಂದು ಹೊಸದಿಲ್ಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿದ ಹಾಜಬ್ಬ ನ.7 ವಿಮಾನದಲ್ಲಿ ಬೆಂಗಳೂರು ಅಥವಾ ಮುಂಬೈ ಮೂಲಕ ದಿಲ್ಲಿಗೆ ತೆರಳಿ, 8 ರಂದು ಹೊಸದಿಲ್ಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಲಿದ್ದೇನೆ ಎಂದು ತಿಳಿಸಿದ್ದಾರೆ.
2020ರ ಜನವರಿಯಲ್ಲಿ ಗಣರಾಜ್ಯೋತ್ಸವ ಸಂದರ್ಭ ಪದ್ಮಶ್ರೀ ಪುರಸ್ಕಾರ ಘೋಷಿಸಿ, ಮಾರ್ಚ್ ನಲ್ಲಿ ಪ್ರದಾನ ಮಾಡುವ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್ನಿಂದಾಗಿ ಲಾಕ್ ಡೌನ್ ಘೋಷಿಸಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು.
Next Story