ಇ-ಸ್ಯಾಂಡ್ ಆ್ಯಪ್ನಲ್ಲಿ ಮರಳು ಲಭ್ಯ
ಉಡುಪಿ, ಅ.26: ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲೂಕುಗಳ ವ್ಯಾಪ್ತಿಯಲ್ಲಿ ಹರಿಯುವ ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಈ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆ್ಯಪ್ನ ಮೂಲಕ ಪೂರೈಸಲು ತೀರ್ಮಾನಿಸಲಾಗಿದೆ.
ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರಿಗೆ/ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು ಉಡುಪಿ ಇ-ಸ್ಯಾಂಡ್ ಆ್ಯಪ್ ಮುಖಾಂತರ ಮರಳನ್ನು ಪಡೆಯಬಹು ದಾಗಿದೆ. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿಲ್ಲ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂಜ್ಞಾನ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2572333, ಸ್ಯಾಂಡ್ಆ್ಯಪ್ ಸಂಪರ್ಕ ಸಂಖ್ಯೆ: 6366745888, 6364024555 (ಆ್ಯಪ್ ಸಂಬಂಧಿ ಮಾಹಿತಿ) 6366871888 (ಆರ್ಥಿಕ ಮಾಹಿತಿ) ಸಂಪರ್ಕಿಸ ಬಹುದು ಎಂದು ಹಿರಿಯ ಭೂಜ್ಞಾನಿ/ ಅನುಷ್ಠಾನಾಧಿಕಾರಿ, ಜಿಲ್ಲಾ 07 ಸದಸ್ಯರ ಸುತಿ (ಸಿಆರ್ಝಡ್) ಉಡುಪಿ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.