ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 58 ಸಾಧಕರಿಗೆ ಪ್ರಶಸ್ತಿ
ಮಂಗಳೂರು, ಅ.30: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಶನಿವಾರ ಜಿಲ್ಲಾಡಳಿತದಿಂದ ಪ್ರಕಟಿಸಲಾಗಿದೆ. ಒಟ್ಟು 58 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕರ ಪಟ್ಟಿ ಇಂತಿದೆ:
ಸಮಾಜ ಸೇವೆ: ಮಂಗಳೂರಿನ ಎಸ್.ಎಸ್. ನಾಯಕ್, ಕಾಟಿಪಳ್ಳದ ಕೂಸಪ್ಪ ಶೆಟ್ಟಿಗಾರ್, ಬೆಳ್ತಂಗಡಿಯ ವಿವೇಕ್ ವಿನ್ಸೆಂಟ್ ಪಾಯಿಸ್, ಮಂಗಳೂರಿನ ಕೆ.ರಾಮ ಮೊಗರೋಡಿ, ಮಂಗಳೂರಿನ ಡಾ.ಅಶೋಕ್ ಶೆಟ್ಟಿ ಬಿ.ಎನ್., ಮಂಗಳೂರಿನ ಬೋಳಾರ್ ತಾರಾನಾಥ್ ಶೆಟ್ಟಿ, ಮಂಗಳೂರು ಸೋಮೇಶ್ವರದ ಅಶೋಕ್, ಮಂಗಳೂರಿನ ಬೊಕ್ಕಪಟ್ಣದ ವೀರನಾಯಕ್ ಜನಸೇವಾ ಟ್ರಸ್ಟ್, ಮುಲ್ಕಿಯ ಬಿಲ್ಲವ ಸಮಾಜ ಸೇವ ಸಂಘ, ಊರ್ವ ಚಿಲಿಂಬಿಯ ಬಾಲಕರ ಸಾರ್ವಜನಿಕ ಶ್ರೀ ಶಾರದ ಮಹೋತ್ಸವ ಟ್ರಸ್ಟ್, ಬಂಟ್ವಾಳ ತಾಲೂಕಿನ ಕಡೆಶಿವಾಲಯದ ಯುವಶಕ್ತಿ ಕಡೆ ಶಿವಾಲಯ, ಮಂಗಳೂರು ಜಪ್ಪು ಕಡೆಕಾರು ಮಲ್ಲಿಕಾರ್ಜುನ ಸೇವಾ ಸಂಘ, ಮಂಗಳೂರು ಕುಳಾಯಿಯ ಸ್ಪಂದನಾ ಫ್ರೆಂಡ್ಸ್ ಸರ್ಕಲ್, ಮಂಗಳೂರು ಬೈಕಂಪಾಡಿ ವಿದ್ಯಾರ್ಥಿ ಸಂಘ ಯುವಕ ಮಂಡಲ, ಉಜಿರೆಯ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ, ಮಂಗಳೂರು ಕಿನ್ಯದ ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಯುವಕ ಮಂಡಲ, ಮಂಗಳೂರು ತೊಕ್ಕೊಟ್ಟುವಿನ ಹೆಲ್ತ್ ಇಂಡಿಯಾ ಫೌಂಡೇಶನ್, ಮಂಗಳೂರು ಮರೋಳಿಯ ವೈಟ್ ಡೌಸ್, ಮಂಗಳೂರು ತಾಲೂಕಿನ ಕೋಟೆಕಾರ್ನ ಕೇಸರಿ ಮಿತ್ರ ವೃಂದ, ಮಂಗಳೂರು ಉಳ್ಳಾಲದ ಶ್ರೀ ಸಾಯಿ ಪರಿವಾರ್ ಟ್ರಸ್ಟ್, ಮಂಗಳೂರು ಹಳೆಯಂಗಡಿಯ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್-ತೋಕೂರು, ಮಂಗಳೂರು ಪಡುಪೆರಾರ್ನ ಶ್ರೀ ನಾಗಬ್ರಹ್ಮ ಯುವಕ ಮಂಡಲ, ಮಂಗಳೂರು ಕಂಕನಾಡಿ ಯುವಕ ವೃಂದ
ಕ್ರೀಡೆ: ಬಂಟ್ವಾಳ ತಾಲೂಕಿನ ಬದಿಗುಡ್ಡ ಮನೆಮಾಣಿ ಉದಯ ಚೌಟ, ಮಂಗಳೂರಿನ ದಿನೇಶ್ ಕುಂದರ್, ಮಂಗಳೂರಿನ ಸತೀಶ್ ಬೋಳಾರ್, ಅನೀಲ್ ಮೆಂಡೋನ್ಸಾ, ಬಂಟ್ವಾಳ ತಾಲೂಕಿನ ಕು. ಜಯಲಕ್ಷ್ಮೀ ಜಿ., ಮಂಗಳೂರಿನ ಕುಲಶೇಖರದ ಕು. ವೆನಿಜಿಯಾ ಆ್ಯನ್ನಿ ಕಾರ್ಲೊ, ಮಂಗಳೂರಿನ ಕುಲಶೇಖರದ ವಿನ್ಸೆಂಟ್ ಪ್ರಕಾಶ್ ಕಾರ್ಲೊ
ಕಂಬಳದಲ್ಲಿ ಹಳದಂಗಡಿ ರವಿಕುಮಾರ್, ಸ್ಯಾಕ್ಸೋಫೋನ್ ವಾದಕದಲ್ಲಿ ಬಂಟ್ವಾಳ ಅಳಕೆಯ ಪಿ.ಕೆ. ದಾಮೋದರ, ನಾಗಸ್ವರ ವಾದಕದಲ್ಲಿ ಮಂಗಳೂರಿನ ಶಿಬರೂರು-ದೇಲಂತಬೆಟ್ಟುವಿನ ಶಿವರಾಮ ಶೇರಿಗಾರ, ಸಾಂಸ್ಕೃತಿಕ ವಿಭಾಗದಲ್ಲಿ ಮಂಗಳೂರಿನ ಹೊಸಬೆಟ್ಟುವಿನ ಶಂಕರ್ ಜೆ. ಶೆಟ್ಟಿ, ತಾಸೆ ವಾದಕ ವಿಭಾಗದಲ್ಲಿ ಮೂಡಬಿದಿರೆಯ ಅಣ್ಣಿ ಸುವರ್ಣ, ನಾದಸ್ವರ ವಾದಕ ವಿಭಾಗದಲ್ಲಿ ಮೂಡಬಿದಿರೆಯ ಎ.ಕೆ. ಉಮಾನಾಥ್ ದೇವಾಡಿಗ, ತಾಳಮದ್ದಳೆ ವಿಭಾಗದಲ್ಲಿ ಬಂಟ್ವಾಳದ ಪದ್ಮನಾಭ್ ಶೆಟ್ಟಿಗಾರ್, ನಾಗಸ್ವರ ವಾದಕ ವಿಭಾಗದಲ್ಲಿ ಬಂಟ್ವಾಳದ ನಾಗೇಶ್ ಶೇರಿಗಾರ, ನಾಟಕ ವಿಭಾಗದಲ್ಲಿ ಕಡಬದ ರವಿ ರಾಮಕುಂಜ, ಯಕ್ಷಗಾನ ವಿಭಾಗದಲ್ಲಿ ಸುಳ್ಯದ ಜಯಾನಂದ ಸಂಪಾಜೆ, ಸಂಗೀತ ವಿಭಾಗದಲ್ಲಿ ಪುತ್ತೂರಿನ ಪಾಂಡುರಂಗ ನಾಯಕ್, ಸಾಂಸ್ಕೃತಿಕ ವಿಭಾಗದಲ್ಲಿ ಪುತ್ತೂರು ಕರ್ಕುಂಜದ ಲಿಂಗಪ್ಪ ಗೌಡ ಕಡೆಂಗ, ಸಾಹಿತ್ಯ ವಿಭಾಗದಲ್ಲಿ ಬೆಳ್ತಂಗಡಿಯ ಪ.ರಾಮಕೃಷ್ಣ ಶಾಸ್ತ್ರಿ, ಸಾಂಸ್ಕೃತಿಕ ವಿಭಾಗದಲ್ಲಿ ಉಳ್ಳಾಲದ ಡಾ.ಅರುಣ್ ಉಳ್ಳಾಲ್, ಜಾನಪದ ವಿಭಾಗದಲ್ಲಿ ಕೊಂಚಾಡಿಯ ಉಮೇಶ್ ಪಂಬದ, ಜಾನಪದ ವಿಭಾಗದಲ್ಲಿ ಹಳೆಯಂಗಡಿಯ ಶ್ರೀ ಕೃಷ್ಣ ಪೂಜಾರಿ, ಜಾನಪದ ವಿಭಾಗದಲ್ಲಿ ಮಂಗಳೂರು ಕೊಂಚಾಡಿಯ ಭಾಸ್ಕರ್ ಬಂಗೇರ, ವೈದ್ಯಕೀಯ ವಿಭಾಗದಲ್ಲಿ ಮಂಗಳಾದೇವಿಯ ಡಾ. ಗೋಪಾಲ್ ಕೃಷ್ಣ ಭಟ್ ಬಿ. ಸಂಕಬಿತ್ತಿಲು, ವೈದ್ಯಕೀಯ ವಿಭಾಗದಲ್ಲಿ ಬಿಜೈನ ಡಾ.ಶಶಿಕಾಂತ್ ತಿವಾರಿ, ನಾಟಿ ವೈದ್ಯ ವಿಭಾಗದಲ್ಲಿ ಬಂಟ್ವಾಳದ ಬಡಗ ಬೆಳ್ಳೂರುವಿನ ಶೀನಾ ಪೂಜಾರಿ, ಪತ್ರಿಕೋದ್ಯಮ ವಿಭಾಗದಲ್ಲಿ ಮಂಗಳೂರು ಕೋಡಿಕಲ್ನ ಶಿವಪ್ರಸಾದ್ ಬಿ., ವಿದ್ಯಾಧರ್ ಶೆಟ್ಟಿ, ಗುವಾಯನ ಕೆರೆಯ ಬಿ.ಶ್ರೀನಿವಾಸ್ ಕುಲಾಲ್, ಗಡಿನಾಡು (ಯಕ್ಷಗಾನ) ವಿಭಾಗದಲ್ಲಿ ಕಾಸರಗೋಡು ಜಿಲ್ಲೆಯ ರಾಘವ್ ಬಳ್ಳಾಲ್ ಕಾರಡ್ಕ, ಹೊರನಾಡು ವಿಭಾಗದಲ್ಲಿ (ಬಹರೈನ್ನಲ್ಲಿ ವಾಸ) ಕಮಲಾಕ್ಷ ಅಮೀನ್, ಚಿತ್ರಕಲೆ ವಿಭಾಗದಲ್ಲಿ ಮಂಗಳೂರು ಕಾಟಿಪಳ್ಳದ ದೇವಿ ಕಿರಣ್ ಗಣೇಶ್ಪುರ, ಕೃಷಿ ವಿಭಾಗದಲ್ಲಿ ಪುತ್ತೂರಿನ ಕಡಮಜಲು ಸುಭಾಸ್ ರೈ ಬಿ.ಎ., ಭರತನಾಟ್ಯದಲ್ಲಿ ಮಂಗಳೂರು ಬಳ್ಳಾಲ್ ಬಾಗ್ನ ಸನಾತನ ನಾಟ್ಯಾಲಯ ಈ ಬಾರಿಯ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.