ಫರಂಗಿಪೇಟೆ : ಕಾರು ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು
ಬಂಟ್ವಾಳ, ನ. 21: ಕಾರೊಂದು ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ರವಿವಾರ ಬೆಳಗ್ಗೆ ನಡೆದಿದೆ.
ಮೃತ ಬೈಕ್ ಸವಾರನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರ ಪ್ರಜ್ವಲ್ (26) ಎಂದು ತಿಳಿದುಬಂದಿದೆ.
ಪ್ರಜ್ವಲ್ ಮಂಗಳೂರಿನ ಎನ್.ಎಂ.ಪಿ.ಟಿ. ಉದ್ಯೋಗಿಯಾಗಿದ್ದು ಕೆಲಸದ ನಿಮಿತ್ತ ಕಂಪೆನಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದಿರುವುದಾಗಿ ದೂರಲಾಗಿದೆ.
ಗಂಭೀರ ಗಾಯಗೊಂಡ ಪ್ರಜ್ವಲ್ ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
Next Story