ಉಡುಪಿ ಜಿಲ್ಲೆಯ ಶಿಕ್ಷಕರ ಗಮನಕ್ಕೆ
ಉಡುಪಿ, ನ.28: ಮುಂಜೂರಾದ ಹುದ್ದೆಗಳಿಗೆ ಅನುಗುಣವಾಗಿ ನ.29 ರಂದು ಉಡುಪಿ ಡಯಟ್ ನಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರ ವರ್ಗಾವಣೆ ಪ್ರಾರಂಭವಾಗಲಿದ್ದು ಅರ್ಜಿ ಸಲ್ಲಿಸಿರುವ ಎಲ್ಲ ಶಿಕ್ಷಕರು ಕೌನ್ಸಿಲಿಂಗ್ನಲ್ಲಿ ಭಾಗವಹಿಸ ಬೇಕಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೆ ದಿನಕರ ಶೆಟ್ಟಿ ಅಂಪಾರು ತಿಳಿಸಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಕೋರಿಕೆ ವರ್ಗಾವಣೆಯು ಪೂರ್ವ ನಿಗದಿಯಂತೆ ನ.24ರಂದು ನಡೆಯಬೇಕಾಗಿತ್ತು. ಆದರೆ ಆ ಸಂದರ್ಭ ದಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳಿಗೆ ಅನುಗುಣವಾಗಿ ವರ್ಗಾವಣೆ ನಡೆಸಬೇಕಾಗಿತ್ತು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶೇ.25ಕ್ಕಿಂತ ಹೆಚ್ಚಿನ ಖಾಲಿ ಹುದ್ದೆಗಳಿರುವುದರಿಂದ ಶಿಕ್ಷಕರಿಗೆ ವರ್ಗಾವಣೆಯಲ್ಲಿ ಅವಕಾಶ ಸಿಗುವುದು ಸಾಧ್ಯವಿರಲಿಲ್ಲ. ಇದನ್ನು ಗಮನಿಸಿ ರಾಜ್ಯಮಟ್ಟದಲ್ಲಿ ಒತ್ತಡ ಹೇರಿ ಮಂಜೂರಾದ ಹುದ್ದೆಗಳ ಆಧಾರದಲ್ಲಿ ವರ್ಗಾವಣೆ ನಡೆಸಲು ಅನುವು ಮಾಡಿಕೊಡಲು ವರ್ಗಾವಣಾ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.