ಉಡುಪಿ: ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಉದ್ಘಾಟನೆ
ಉಡುಪಿ, ನ.29: ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗ, ಉಡುಪಿಯ ಶ್ರೀಕೃಷ್ಣಮಠ ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಹಾಗೂ ಅತಿಥಇ ಕಲಾವಿದರ ಸಹಯೋಗದೊಂದಿಗೆ ಆಯೋಜಿಸಿರುವ ಚಿಟ್ಟಾಣಿ ಸಂಸ್ಮರಣಾ ಸಪ್ತಾಹ-2021 ರವಿವಾರ ಸಂಜೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನ ಗೊಂಡಿತು.
ಪರ್ಯಾಯ ಶ್ರೀಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥರು ಮತ್ತು ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥರು ಒಂದು ವಾರ ಕಾಲ ನಡೆಯುವ ಚಿಟ್ಟಾಣಿ ಸಪ್ತಾಹವನ್ನು ಉದ್ಘಾಟಿಸಿದರು.
ಯಕ್ಷಗಾನ ಕಲಾರಂಗದ ಪ್ರಧಾನ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನೆಯ ನಂತರ ಸತ್ಯಹರಿಶ್ಚಂದ್ರ ಯಕ್ಷಗಾನ ತುಂಬು ಪ್ರೇಕ್ಷಕರೆದುರು ಪ್ರದರ್ಶನಗೊಂಡಿತು.
Next Story