ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಾಹಿರ ಝುಬೈರ್ ನೇಮಕ
ಪುತ್ತೂರು: ರಾಜ್ಯ ಮಹಿಳಾ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಪುತ್ತೂರಿನ ನೋಟರಿ ನ್ಯಾಯವಾದಿ ಸಾಹಿರ ಝುಬೈರ್ ನೇಮಕಗೊಂಡಿದ್ದಾರೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ ಅವರು ಸಾಹಿರ ಝುಬೈರ್ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ನ ಕಾರ್ಯದರ್ಶಿಯನ್ನಾಗಿ ನೇಮಕ ಗೊಳಿಸಿ ಅದೇಶಿಸಿರುತ್ತಾರೆ.
ಪುತ್ತೂರು ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ ಶಾಲೆಟ್ ಪಿಂಟೋ ರವರ ಶಿಫಾರಸ್ಸಿನ ಮೇರೆಗೆ ಸಾಹಿರ ಝುಬೈರ್ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ನ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಅದೇಶಿಸಲಾಗಿದೆ.
ಪುತ್ತೂರು ದರ್ಬೆ ನಿವಾಸಿಯಾಗಿರುವ ಸಾಹಿರ ಝುಬೈರ್ ರವರು ನೋಟರಿ ನ್ಯಾಯವಾದಿಗಳಾಗಿದ್ದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಯಾಗಿ, ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ ಪಕ್ಷ ಸಂಘಟಣೆಯಲ್ಲಿ ತೊಡಗಿಸಿಕೊಂಡಿದ್ದು, ಪುತ್ತೂರು ಕಾನೂನು ಸೇವಾಪ್ರಾಧಿಕಾರದ ಸಂಪನ್ಮೂಲ ವ್ಯಕ್ತಿಯಾಗಿ, ಪುತ್ತೂರು ಸ್ವರ್ಣ ರೋಟರಿ ಸಂಸ್ಥೆಯ ಸದಸ್ಯರಾಗಿ, ಪುತ್ತೂರು ಸ್ವಾಭಿಮಾನ ವೇದಿಕೆಯ ಸದಸ್ಯರಾಗಿ, ಜಿಲ್ಲಾ ಮಕ್ಕಳ ಹಕ್ಕುಗಳ ಸಂಚಲನ ಸಮಿತಿ ಸದಸ್ಯರಾಗಿ, ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯರಾಗಿ ಹಲವಾರು ಸಾಮಾಜಿಕ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ