ಉಪ್ಪಿನಂಗಡಿ: ಲಾರಿ ಢಿಕ್ಕಿ ಪ್ರಕರಣ; ಗಾಯಾಳು ಮಹಿಳೆ ಮೃತ್ಯು
ಫೈಲ್ ಫೋಟೊ
ಉಪ್ಪಿನಂಗಡಿ: ಇಲ್ಲಿನ ಮಠ ಎಂಬಲ್ಲಿ ಸೋಮವಾರ ಸಂಜೆ ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಖತೀಜಮ್ಮ (46) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ತನ್ನಿಬ್ಬರು ಮಕ್ಕಳೊಂದಿಗೆ ತವರು ಮನೆಯಿಂದ ಮಠ ಬಳಿಯ ಹಿರ್ತಡ್ಕದ ತನ್ನ ಮನೆಗೆ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಲಾರಿ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದಿತ್ತು. ಈ ಸಂದರ್ಭ ಅಟೋ ರಿಕ್ಷಾದಲ್ಲಿದ್ದ ಟಿ. ಮೊಹಮ್ಮದ್ ಅಲ್ತಾಫ್ (12) ಮೃತಪಟ್ಟಿದ್ದು, ರಿಕ್ಷಾದಲ್ಲಿದ್ದ ಈತನ ತಾಯಿ ಖತೀಜಮ್ಮ (46) ಅಣ್ಣ ಮೊಹಮ್ಮದ್ ಅಸ್ರಾರ್ (23) ಮತ್ತು ರಿಕ್ಷಾ ಚಾಲಕ ಹಿರ್ತಡ್ಕ ನಿವಾಸಿ ಸಿದ್ದೀಕ್ (34) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದ ಖತಿಜಮ್ಮ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಮಂಗಳವಾರ ಮೃತಪಟ್ಟಿದ್ದಾರೆ.
Next Story