ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಕುಂದಾಪುರ, ಡಿ.6: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಡೇರಹೋಬಳಿ ಗ್ರಾಮದ ಗಾಂಧಿ ಮೈದಾನದ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ರಾತ್ರಿ 8.15ರ ಸುಮಾರಿಗೆ ನಡೆದಿದೆ.
ಉಡುಪಿ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಗಿರೀಶ್ ಎಂಬವರ ಕಾರು, ರಸ್ತೆ ದಾಟುತ್ತಿದ್ದ ನವೀನ್ ಎಂಬವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆ ಬಿದ್ದು ಗಂಭೀರವಾಗಿ ಗಾಯಗೊಂಡ ನವೀನ್ ಸ್ಥಳದಲ್ಲಿಯೇ ಮೃತಪಟ್ಟರು. ಈ ಅಪಘಾತ ದಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಿವಾಕರ ಆಚಾರ್ಯ ಎಂಬವರು ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಕುಂದಾಫುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story