ಸಾಲಿಗ್ರಾಮ ದೇವಳದ ಕೆರೆಗೆ ಹಾರಿ ಯುವಕ ಆತ್ಮಹತ್ಯೆ
ಕೋಟ, ಡಿ.7: ಕೆಲಸ ಇಲ್ಲದೆ ಮಾನಸಿಕ ಖಿನ್ನೆತೆಗೆ ಒಳಗಾಗಿದ್ದ ಯುವಕನೋರ್ವ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಡಿ.7ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಪಾಂಡೇಶ್ವರ ಯಡಬೆಟ್ಟು ನಿವಾಸಿ ಸುನೀಲ್ ಮೊಗವೀರ (28) ಎಂದು ಗುರುತಿಸಲಾಗಿದೆ. ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕಡೆಯಿಂದ ಓಡಿ ಬಂದ ಸುನೀಲ್, ಕೆರೆಗೆ ಹಾಕಿದ ತಡೆಬೇಲಿಯನ್ನು ಹಾರಿ ಏಕಾಏಕಿ 20 ಅಡಿ ಆಳದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆ ಎತ್ತಿದರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story