ವಿಧಾನ ಪರಿಷತ್ ಚುನಾವಣೆ; ಮಧ್ಯ ಮಾರಾಟ, ಸಾಗಾಟ ನಿಷೇಧ
ಮಂಗಳೂರು, ಡಿ.7: ರಾಜ್ಯ ವಿಧಾನ ಪರಿಷತ್ತಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ದ್ವಿಸದಸ್ಯತ್ವ ಸ್ಥಾನಕ್ಕಾಗಿ ಡಿ.10 ರಂದು ಚುನಾವಣೆಯ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಹಾಗೂ ಮದ್ಯ ಮುಕ್ತ ದಿನವೆಂದು ಘೋಷಿಸಿ ದ.ಕ. ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಡಿ.9ರ ಮಧ್ಯರಾತ್ರಿ 12 ಗಂಟೆಯಿಂದ ಡಿ.10ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲಾದ್ಯಂತ ಎಲ್ಲಾ ವಿಧಧ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ಯ ಮುಕ್ತ ದಿನಗಳೆಂದು ಘೋಷಿಸಿದ್ದಾರೆ.
Next Story