ಕುಂಬಳೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ
ಕಾಸರಗೋಡ, ಡಿ.8: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್ ನಲ್ಲಿ ಮೂರು ಕಾರುಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೊಗ್ರಾಲ್ ಪುತ್ತೂರಿನ ಜಗದೀಶ್(30) ಬಾಲಕೃಷ್ಣ(50) ಮತ್ತು ಬದ್ರಿಯಾ ನಗರದ ಮುರ್ಷಿದ್(22) ಗಾಯಗೊಂಡವರು.
ಕುಂಬಳೆ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರಿಗೆ ಎದುರಿನಿಂದ ಬರುತ್ತಿದ್ದ್ದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಈ ವೇಳೆ ಅದರ ಹಿಂದಿನಿಂದ ಬಂದ ವ್ಯಾಗನ್ ಕಾರು ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರಿಗೆ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story