ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ
ಉಡುಪಿ, ಡಿ.8: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಸತತ ಮೂರನೇ ಅವಧಿಗೆ ಆಯ್ಕೆಯಾದ ನೀಲಾವರ ಸುರೇಂದ್ರ ಅಡಿಗ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿ ತಾಧಿಕಾರಿಯಾಗಿದ್ದ ಕುಮಾರ ಬೆಕ್ಕೇರಿ, ನೀಲಾವರ ಸುರೇಂದ್ರ ಅಡಿಗ ಅವರಿಗೆ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಧಿಕಾರವನ್ನು ಹಸ್ತಾಂತರಿಸಿದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಯಾಗಿದ್ದ ಕುಮಾರ ಬೆಕ್ಕೇರಿ, ನೀಲಾವರ ಸುರೇಂದ್ರ ಅಡಿಗ ಅವರಿಗೆ ತಮ್ಮ ಕಛೇರಿಯಲ್ಲಿ ಸನ್ಮಾನಿಸಿ ಅಧಿಕಾರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಸಾಪ ನಿಕಟಪೂರ್ವ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನಿಕಟ ಪೂರ್ವ ತಾಲೂಕು ಅಧ್ಯಕ್ಷರುಗಳಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಬಿ.ಪುಂಡಲೀಕ ಮರಾಠೆ, ನಾರಾಯಣ ಮಡಿ, ಕಸಾಪ ಸದಸ್ಯರುಗಳಾದ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಭುವನ ಪ್ರಸಾದ್ ಹೆಗ್ಡೆ, ನರಸಿಂಹ ಮೂರ್ತಿ, ಕಚೇರಿ ಸಿಬ್ಬಂಧಿಗಳಾದ ಗಣೇಶ್, ದೀಕ್ಷಿತ್ ಉಪಸ್ಥಿತರಿದ್ದರು.