ವಿಷ ಸೇವಿಸಿ ಆತ್ಮಹತ್ಯೆ
ಶಂಕರನಾರಾಯಣ, ಡಿ.16: ವಿಪರೀತ ಮದ್ಯಸೇವನೆಯ ಚಟ ಹೊಂದಿದ್ದು, ಊರಿನಲ್ಲಿ ವಿಪರೀತ ಸಾಲ ಮಾಡಿಕೊಂಡಿದ್ದ ಕುಳ್ಳುಂಜೆ ಗ್ರಾಮದ ಮಾವಿನಕೊಡ್ಲು ನಿವಾಸಿ ಸುಧಾಕರ ನಾಯ್ಕ (39) ಡಿ.14ರ ಸಂಜೆ ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಿಸಿ ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story