ಬೇಲೂರು ಬಳಿ ರಸ್ತೆ ಅಪಘಾತ; ಬೆಳ್ತಂಗಡಿಯ ಯುವಕ ಮೃತ್ಯು
ಬೆಳ್ತಂಗಡಿ : ಹಾಸನ ಜಿಲ್ಲೆಯ ಬೇಲೂರು ಬಳಿ ರವಿವಾರ ರಾತ್ರಿ ಅಲ್ಟೊ ಕಾರು ಮರಕ್ಕೆ ಢಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪೆರಾಲ್ದರಕಟ್ಟೆ ನಿವಾಸಿ, ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಪೆರಾಲ್ದರಕಟ್ಟೆಯ ಶರೀಫ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನೂರ್ ಮುಹಮ್ಮದ್, ಬಳಂಜದ ಅಝೀಝ್ ಹಾಗೂ ಕಕ್ಕಿಂಜೆಯ ಗಾಂಧಿ ನಗರ ನಿವಾಸಿ ಸಲೀಂ ಎಂಬವರಾಗಿದ್ದಾರೆ.
ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊರೆದೊಯ್ಯಲಾಗಿದೆ.
ಇವರೆಲ್ಲರೂ ಸ್ನೇಹಿತರಾಗಿದ್ದು ಜೊತೆಯಾಗಿ ಬೇಲೂರು ಕಡೆಗೆ ತೆರಳಿ ವಾಪಾಸಾಗುತ್ತಿದ್ದಾಗ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story