ಪಡುಬಿದ್ರಿ ಸಹಕಾರ ಸಂಗಮ-ಸಮೃದ್ಧಿ ಸಂಭ್ರಮ ಸಮಾರೋಪ
ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಹಕಾರ-ಸಂಗಮ ಸಮೃದ್ಧಿ ಸಂಭ್ರಮದ ಪ್ರಯುಕ್ತ ಉಡುಪಿ ವಲಯದ ಕೃಷಿಪತ್ತಿನ ಸಹಕಾರ ಸಂಘಗಳಿಗೆ ಭಾನುವಾರ ಜರಗಿದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮಂದಾರ್ತಿ ಸೇವಾ ಸಹಕಾರಿ ಸಂಘ ಪ್ರಥಮ ಬಹುಮಾನ ಪಡೆದುಕೊಂಡಿತು.
ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ದ್ವಿತೀಯ, ಕೋಟ ಸಹಕಾರಿ ವ್ಯವಸಾಯಿಕ ಸಂಘ ತೃತೀಯ ಬಹುಮಾನ ಹಾಗೂ ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘ ಸಮಾಧಾನಕರ ಬಹುಮಾನ ಪಡೆಯಿತು.
ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ ಕುಮಾರ್ ಎಸ್.ವಿ. ಬಹುಮಾನ ವಿತರಿಸಿದರು. ಸೊಸೈಟಿಯ ಅಧ್ಯಕ್ಷ ವೈ.ಸುಧೀರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಪಡುಬಿದ್ರಿ ಸಹಕಾರಿ ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಕೋಟ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ, ನಿರ್ದೇಶಕ ರವೀಂದ್ರ ಕಾಮತ್, ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ, ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಶ್ರೀಧರ್ ಪಿ.ಎಸ್., ಟಿ.ಎ.ಪಿ.ಸಿ.ಎಮ್.ಎಸ್. ಅಧ್ಯಕ್ಷ ಅಶೊಕ್ ಶೆಟ್ಟಿ ಕರ್ಜೆ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನಿರ್ದೇಶಕರಾದ ವೈ.ಜಿ. ರಸೂಲ್, ಗಿರೀಶ್ ಪಲಿಮಾರ್, ವಾಸುದೇವ ದೇವಾಡಿಗ, ರಾಜಾರಾಮ್ ರಾವ್, ಮಾಧವ ಆಚಾರ್ಯ, ಯಶವಂತ್ ಪಿ.ಬಿ., ಸ್ಟ್ಯಾನಿ ಕ್ವಾಡ್ರಸ್, ಸುಚರಿತಾ ಎಲ್. ಅಮೀನ್, ಕುಸುಮಾ ಎಮ್. ಕರ್ಕೇರ, ಕಾಂಚನಾ, ವಲಯ ಮೇಲ್ವಿಚಾರಕ ಬಾಲಕೃಷ್ಣ ರಾವ್, ಮುಖ್ಯಕಾರ್ಯನಿರ್ವಾಹಣಾಧಿಕಾರಿ ನಿಶ್ಮಿತಾ ಪಿ.ಎಚ್, ಕಾರ್ಯಕ್ರಮ ಸಂಚಾಲಕ ರವಿಂದ್ರ ರಾವ್ ಹಾಗೂ ಸೊಸೈಟಿಯ ಸಿಬ್ಬಂದಿ ಉಪಸ್ಥಿತರಿದ್ದರು.