ಕಾಸರಗೋಡು: ಟ್ಯಾಂಕರ್ ಢಿಕ್ಕಿ; ಬೈಕ್ ಸವಾರ ಮೃತ್ಯು
ಕಾಸರಗೋಡು, ಜ.16: ಬೈಕ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಗರದ ಹೊಸ ಬಸ್ ನಿಲ್ದಾಣ ಪರಿಸರದ ಸರ್ಕಲ್ ಬಳಿ ನಡೆದಿದೆ.
ಮೃತರನ್ನು ನುಳ್ಳಿಪ್ಪಾಡಿ ನಿವಾಸಿ ಅಬ್ದುಲ್ ಮಜೀದ್ (42) ಎಂದು ಗುರುತಿಸಲಾಗಿದೆ.
ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ಅಬ್ದುಲ್ ಮಜೀದ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ.
ಕಾಸರಗೋಡು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಟ್ಯಾಂಕರ್ ಚಾಲಕ ನನ್ನು ವಶಕ್ಕೆ ಪಡೆದಿದ್ದಾರೆ.
Next Story