ಜ.18: ಯುವ ಕಾಂಗ್ರೆಸ್ನಿಂದ ಕಾಲ್ನಡಿಗೆ ಜಾಥಾ
ಮಂಗಳೂರು, ಜ.17: ಗಣರಾಜ್ಯೋತ್ಸವ ಪರೇಡಿಗೆ ನಾರಾಯಣ ಗುರುವಿನ ಸ್ತಬ್ಧಚಿತ್ರ ಪ್ರದರ್ಶಿಸಲು ಅವಕಾಶ ಕಲ್ಪಿಸದ ಕೇಂದ್ರ ಸರಕಾರದ ಧೋರಣೆಯನ್ನು ಖಂಡಿಸಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ''ನಮ್ಮನಡಿಗೆ... ಬ್ರಹ್ಮಶ್ರೀ ನಾರಾಯಣಗುರು ಕಡೆಗೆ'' ಎಂಬ ಘೋಷಾ ವಾಕ್ಯದೊಂದಿಗೆ ಜ.18ರಂದು ಮಧ್ಯಾಹ್ನ 12ಕ್ಕೆ ಕಾಲ್ನಡಿಗೆ ಜಾಥಾ ನಡೆಯಲಿದೆ.
ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಿಂದ ಕುದ್ರೋಳಿ ಶ್ರೀಗೋಕರ್ಣನಾಥೇಶ್ವರ ದೇವಸ್ಥಾನದವರೆಗೆ ಜಾಥಾ ನಡೆಯಲಿದೆ ಎಂದು ಯುವ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಲಕ್ಮಾನ್ ಬಂಟ್ವಾಳ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story