ಕುಮಟಾ: ಅನಿಲ ಟ್ಯಾಂಕರ್ ಪಲ್ಟಿ
ಅನಿಲ ಸೋರಿಕೆ
ಕುಮಟಾ: ಪಟ್ಟಣದ ಹೊನಮಾಂವ ದೇವಸ್ಥಾನದ ಬಳಿ ಅನಿಲ ತುಂಬಿದ ಟ್ಯಾಂಕರ್ ಸಾಗಿಸುತ್ತಿದ್ದ ಲಾರಿಯಿಂದ ಕಳಚಿ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಬೆಳಗಾವಿಗೆ ಸಾಗಿಸುತ್ತಿದ್ದಾಗ ಲಾರಿಯ ಸಂಪರ್ಕ ತಪ್ಪಿದ ಪರಿಣಾಮ ಟ್ಯಾಂಕರ್ ಉರುಳಿ ಬಿದ್ದಿದ್ದು, ಈ ವೇಳೆ ಟ್ಯಾಂಕರ್ನ ಸುರಕ್ಷಿತ ವಾಲ್ವ್ ಸಡಿಲಗೊಂಡು ಅನಿಲ ಸೋರಿಕೆ ಉಂಟಾಗಿದ್ದು, ಅದನ್ನು ತಕ್ಷಣ ನಿಲ್ಲಿಸಲಾಯಿತು ಎಂದು ತಿಳಿದುಬಂದಿದೆ.
ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ಪಟ್ಟಣದ ಗಿಬ್ ವೃತ್ತದ ಸಿದ್ದಾಪುರ - ಚಂದಾವರ ಮಾರ್ಗ ಮೂಲಕ ಹೊನ್ನಾವರದ ಎಲ್.ಐ.ಸಿ ಕಚೇರಿ ಬಳಿ ಹೆದ್ದಾರಿ ಸಂಪರ್ಕಿಸುವಂತೆ ಕ್ರಮ ಕೈಗೊಳ್ಳಲಾಯಿತು.
ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ನೆರವು ನೀಡಿದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Next Story