ಆಧಾರ್ ಸೀಡಿಂಗ್ಗೆ ಸೂಚನೆ
ಮಂಗಳೂರು, ಜ.25: ತಾಲೂಕಿನ ಕಾಲೇಜುಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನ ಶುಲ್ಕ ವಿನಾಯಿತಿ ಮಂಜೂರಾಗಿದೆ. ಕೆಲವು ವಿದ್ಯಾರ್ಥಿಗಳ ಬ್ಯಾಂಕ್ ಅಥವಾ ಅಂಚೆ ಕಚೇರಿಯ ಉಳಿತಾಯ ಖಾತೆಗೆ ಎನ್ಪಿಸಿಐ ಆಧಾರ್ ಸೀಡಿಂಗ್ ಆಗದ ಕಾರಣ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮೊತ್ತ ಜಮೆಯಾಗಿಲ್ಲ.
ಎನ್ಪಿಸಿಐ ಆಧಾರ್ ಸೀಡಿಂಗ್ ಕಡ್ಡಾಯಗೊಳಿಸಿರುವ ಕಾರಣ ವಿದ್ಯಾರ್ಥಿಗಳು ಬ್ಯಾಂಕ್ ಅಥವಾ ಅಂಚೆ ಕಚೇರಿಯ ಖಾತೆಗೆ ಜ.31ರೊಳಗೆ ಎನ್ಪಿಸಿಐ ಆಧಾರ್ ಸೀಡಿಂಗ್ ಮಾಡಿಸಬೇಕು. ಹೆಚ್ಚಿನ ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯ ಕಚೇರಿ, ರೇಡಿಯೋ ಪಾರ್ಕ್, ಉರ್ವಸ್ಟೋರ್, ಮಂಗಳೂರು (ದೂ.ಸಂ: 0824-2453650) ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story