ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದ ಆರೋಪಿ ಪರಾರಿ
ಕಾಸರಗೋಡು, ಮೇ 23: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಆರೋಪಿಯೋರ್ವ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಇಂದು ಬೆಳಗ್ಗೆ ವಿದ್ಯಾನಗರದಲ್ಲಿ ನಡೆದಿದೆ.
ಆಲಂಪಾಡಿಯ ಆಮಿರಲಿ ಪರಾರಿಯಾದ ಆರೋಪಿ.
ಈತನನ್ನು ಕಣ್ಣೂರು ಸೆಂಟ್ರಲ್ ಜೈಲಿನಿಂದ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತರುತ್ತಿದ್ದಾಗ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಮಿರಲಿ ವಿದ್ಯಾನಗರ ಜಂಕ್ಷನ್ ಬಳಿ ತಪ್ಪಿಸಿ ಪರಾರಿಯಾಗಿದ್ದಾನೆ. ಈತ 20ಕ್ಕೂ ಅಧಿಕ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಯಾಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Next Story