ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಯುವಕ ಮೃತ್ಯು
ಮಹೇಶ
ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಮೃತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಕಂಚುಕೋಟೆಯ ನಿವಾಸಿ ಮಹೇಶ (33) ಎಂದು ಗುರುತಿಸಲಾಗಿದೆ.
ಮಹೇಶ ಹಾಗು ಸ್ನೇಹಿತರು ಮುರುಡೇಶ್ವರಕ್ಕೆ ಬಂದಿದ್ದರು. ರವಿವಾರ ಮುರುಡೇಶ್ವರ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ಮಹೇಶ ಕೊಚ್ಚಿಕೊಂಡು ಹೋಗಿದ್ದು, ಮೀನುಗಾರರು ಆತನನ್ನು ರಕ್ಷಣೆ ಮಾಡಿದರಾದರೂ ಆಸ್ಪತ್ರೆಗೆ ಸಾಗಿಸುವ ವೇಳೆ ಮಹೇಶ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story