ಹಂಡೇಲು: ಕಸಾಯಿಖಾನೆಗೆ ಪೊಲೀಸರ ದಾಳಿ
ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಆರೋಪದಲ್ಲಿ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿದ್ದಾರೆ.
ಹಂಡೇಲು ನಿವಾಸಿ ಹಸನ್ ಬಾವ ಎಂಬಾತ ಕಸಾಯಿಖಾನೆ ನಡೆಸುತ್ತಿದ್ದ ಎನ್ನುವ ಖಚಿತ ಮಾಹಿತಿ ಮೇರೆಗೆ ನಿರಂಜನ್ ಕುಮಾರ್, ಉಪನಿರೀಕ್ಷಕರರಾದ ಸುದೀಪ್, ಸಿದ್ದಪ್ಪ, ದಿವಾಕರ್ ರೈ ಸಹಿತ ಸಿಬ್ಬಂದಿ ದಾಳಿ ನಡೆಸಿದ್ದು, ಜಾನುವಾರು ಹಾಗು ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಅರೋಪಿ ಹಸನ್ ಬಾವ ವಿರುದ್ಧ 2021ರಲ್ಲಿ ಅಕ್ರಮವಾಗಿ ದನದ ಮಾಂಸ ಇರಿಸಿದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story