ಸ್ವಾತಂತ್ರ್ಯದ ಅಮೃತ ಮಹೋತ್ಸವ; ಸಾಮಾಜಿಕ ಸಾಮರಸ್ಯ ಸದೃಢಗೊಳಿಸುವ ಪ್ರತಿಜ್ಞೆಗೆ ಖಾಝಿ ಮಾಣಿ ಉಸ್ತಾದ್ ಕರೆ
ಖಾಝಿ ಮಾಣಿ ಉಸ್ತಾದ್
ಮಂಗಳೂರು: 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸರ್ವಧರ್ಮೀಯರೂ 'ಸಾಮಾಜಿಕ ಸಾಮರಸ್ಯವನ್ನು ಸದೃಢ ಗೊಳಿಸುವ' ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸುನ್ನಿ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಜಮಾಅತ್ ಹಾಗೂ ದ.ಕ.ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿ ಝೈನುಲ್ ಉಲಮಾ ಮಾಣಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಮ್ಮ ದೇಶದಲ್ಲಿ ಸಹಬಾಳ್ವೆ, ಸಾಮರಸ್ಯಗಳಿಗೆ ಧಕ್ಕೆ ಉಂಟಾಗುವ ಘಟನೆಗಳು ಘಟಿಸಬಾರದು. ನಮ್ಮ ದೇಶದ ಉಸಿರು ಇರುವುದೇ ವಿವಿಧತೆಯಲ್ಲಿ ಏಕತೆ ಎಂಬ ಉದಾತ್ತ ಪರಿಕಲ್ಪನೆಯಲ್ಲಿ. ಅದನ್ನು ಉಳಿಸಿಕೊಳ್ಳುವ ಹೊಣೆ ನಮ್ಮ ಮೇಲಿದೆ. ಆ ಹೊಣೆಗಾರಿಕೆಯನ್ನು ಸ್ವಾತಂತ್ರೋತ್ಸವವು ನೆನಪಿಸುವಂತಾಗಲಿ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story