ಕರಾವಳಿಯ ಪಡಿತರದಾರರಿಗೆ ಕುಚ್ಚಲು ಅಕ್ಕಿ: ಸಂಸದ ನಳಿನ್ ಕುಮಾರ್ ಅಭಿನಂದನೆ
ಮಂಗಳೂರು, ಸೆ.15: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
ಕರಾವಳಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಬೆಳ್ತಿಗೆ ಅಕ್ಕಿಯ ಬದಲು ಉತ್ತಮ ಗುಣಮಟ್ಟದ ಸ್ಥಳೀಯವಾಗಿ ಖರೀದಿ ಮಾಡಿದ ಕುಚ್ಚಲು ಅಕ್ಕಿಯನ್ನು ವಿತರಿಸಬೇಕೆಂದು ಮಾಡಿದ ಮನವಿಗೆ ಸ್ಪಂದಿಸಿ, ಕುಚ್ಚಲು ಅಕ್ಕಿ ವಿತರಣೆಗೆ ಆದೇಶ ಹೊರಡಿಸಿರುವುದಕ್ಕೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ ಉಪಸ್ಥಿತರಿದ್ದರು.
Next Story