ಮಂಜೇಶ್ವರ: ಕೆಎಸ್ಸಾರ್ಟಿಸಿ ಬಸ್ ಮಗುಚಿ ಬಿದ್ದು 15ಕ್ಕೂ ಅಧಿಕ ಮಂದಿಗೆ ಗಾಯ
ಕಾಸರಗೋಡು : ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಘಟನೆ ಮಂಜೇಶ್ವರ ಸಮೀಪದ ಪೊಸೋಟ್ ನಲ್ಲಿ ಇಂದು ಸಂಜೆ ನಡೆದಿದೆ.
ಅಪಘಾತದಿಂದ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಕೇರಳ ಮಲಬಾರ್ ಬಸ್ ಪೊಸೋಟ್ ಪೆಟ್ರೋಲ್ ಪಂಪ್ ಬಳಿ ರಸ್ತೆ ಯಿಂದ ಮಗುಚಿದೆ. ಬಸ್ಸಿನಲ್ಲಿ 40ಕ್ಕೂಅಧಿಕ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು, ಪೊಲೀಸರು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. 15 ಮಂದಿಯನ್ನು ವಿವಿಧ ಅಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.