ಕಾಸರಗೋಡು: ಬಸ್ ಢಿಕ್ಕಿಯಾಗಿ ಮಗು ಮೃತ್ಯು
ಕಾಸರಗೋಡು: ಖಾಸಗಿ ಬಸ್ ಢಿಕ್ಕಿಯಾಗಿ ಮಗು ಮೃತಪಟ್ಟ ಘಟನೆ ಚೆರ್ಕಳದಲ್ಲಿ ಶನಿವಾರ ಸಂಜೆ ನಡೆದಿದೆ.
ಸೀತಾಂಗೋಳಿಯ ಆಶಿಕ್ - ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟ ಬಾಲಕ. ಜೊತೆಗಿದ್ದ ತಾಯಿ ಸುಬೈದಾ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.
ಚೆರ್ಕಳ ಬಸ್ಸು ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಕಾಸರಗೊಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ.
Next Story