-

"ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು"

ಬೆಂಕಿ ನಂದಿಸುವ ನೀರಿನ ಟ್ಯಾಂಕರ್‌ಗಳನ್ನು ಒದಗಿಸಿಕೊಡಲು ಕೈಗಾರಿಕೆ, ಉದ್ದಿಮೆಗಳು ಕೈಜೋಡಿಸಿ: ದ.ಕ. ಡಿಸಿ ರವಿಕುಮಾರ್

-

ಮಂಗಳೂರು: ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಳ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು, ಉದ್ದಿಮೆಗಳು ಬೆಂಕಿ ನಂದಿಸುವ ನೀರಿನ ಟ್ಯಾಂಕರ್‌ಗಳನ್ನು ಒದಗಿಸಿಕೊಡಲು ಕೈಜೋಡಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕರೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಶುಕ್ರವಾರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಂಸಿಎಫ್, ಎಂಆರ್‌ಪಿಯಲ್ ಐಒಸಿ ಸೇರಿದಂತೆ ಸಾಕಷ್ಟು ಬೃಹತ್ ಕೈಗಾರಿಕೆಗಳು ಜಲ್ಲೆಯಲ್ಲಿವೆ, ಬೇಸಿಗೆಯಲ್ಲಿ ಹೆಚ್ಚು ಕಂಡುಬರುವ ಕಾಳ್ಗಿಚ್ಚು ಶಮನಕ್ಕೆ ಹಾಗೂ ಇತರೆಡೆ ಸಂಭವಿಸುವ ಬೆಂಕಿ ಅವಘಡಗಳನ್ನು ನಂದಿಸಲು ಇದೀಗ ಅಗ್ನಿಶಾಮಕ ದಳದಲ್ಲಿ ಇರುವ ಟ್ಯಾಂಕರ್‌ಗಳೊಂದಿಗೆ ಇನ್ನಷ್ಟು ಟ್ಯಾಂಕರ್ ಗಳು ಇದ್ದಲ್ಲಿ ಅನುಕೂಲವಾಗಲಿದೆ. ಆ ದಿಸೆಯಲ್ಲಿ ವಹಿಸಬಹುದಾದ ಕ್ರಮಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಅವರಿಗೆ  ಸೂಚಿಸಿದರು.

ಈ ಕುರಿತಂತೆ ಅಗ್ನಿಶಾಮಕ ದಳದಿಂದ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಒಂದು ವೇಳೆ ಅಕಾಲಿಕ ಮಳೆ ಎದುರಾದಲ್ಲಿ ಸಾರ್ವಜನಿಕರ ಮೇಲೆ ಉಂಟಾಗುವ ದುಷ್ಪರಿಣಾಮಗಳಿಗೆ ಅಗತ್ಯ ಔಷಧಿಗಳನ್ನು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನಿರಿಸಿಕೊಳ್ಳಬೇಕು ಹಾಗೂ ಬಿಸಿಗಾಳಿ ಬೀಸುವ ಬಗ್ಗೆ ಸಾರ್ವಜನಿಕರಿಗೆ ಆಕಾಶವಾಣಿ ಹಾಗೂ ವಿವಿಧ ಮಾಧ್ಯಮಗಳ ಮೂಲಕ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತಿಳಿಸಿಕೊಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಯವರು, ಜಿಲ್ಲೆಯ ಗೋಶಾಲೆಗಳಲ್ಲಿ ನೀರು ಹಾಗೂ ಮೇವು ಕಡಿಮೆಯಾಗದಂತೆ ಎಚ್ಚರ ವಹಿಸಬೇಕು ಎಂದು ಪಶುಸಂಗೋಪನೆ ಇಲಾಖೆಯ ಅಧಿಕಾರಿಗೆ ನಿರ್ದೇಶನ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ವಾರ್ಡ್‌ಗಳಲ್ಲೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಕುಡಿಯುವ ನೀರು ಪೂರೈಕೆ ಮಾಡಲು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು. ತುಂಬೆ ಆಣೆಕಟ್ಟಿನಲ್ಲಿ ನೀರು ಅತ್ಯಂತ ಕಡಿಮೆಯಾಗುವ ಮಟ್ಟ ತಲುಪಿದ್ದಲ್ಲೀ, ಪರ್ಯಾಯವಾಗಿ ದಿನ ಬಿಟ್ಟು ದಿನ ನೀರು ಪೂರೈಕೆ ಹಾಗೂ ಕನಿಷ್ಠ 3 ರಿಂದ 4 ತಾಸು ನೀರು ಪೂರೈಕೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಮುಲ್ಕಿಯಲ್ಲಿ 10, ಮೂಡುಬಿದರೆಯಲ್ಲಿ 2 ಹಾಗೂ ಸೋಮೇಶ್ವರದಲ್ಲಿ 4 ಟ್ಯಾಂಕರ‌್ಗಳ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಳಿದಂತೆ ಇತರೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅಧಿಕಾರಿ ಸಭೆಗೆ ತಿಳಿಸಿದಾಗ, ಸಮಸ್ಯೆ ಎದುರಾದರಲ್ಲಿ ಜಿಲ್ಲೆಯ ಜಿಯೋಲಾಜಿಸ್ಟ್‌ಗಳ ನೆರವಿನಿಂದ ಹೊಸ ಬೋರ್ವೆಲ್‌ಗಳನ್ನು ಕೊರೆಸಿ ನೀರು ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕು, ಎಲ್ಲಿ ಅಂರ್ತಜಲ ಲಭ್ಯವೂ, ಸರಕಾರ ಜಾಗ, ಸರಕಾರಿ  ಕಚೇರಿಗಳ ಆಸುಪಾಸು, ಶಾಲೆ-ಅಂಗನವಾಡಿ ವ್ಯಾಪ್ತಿ ಸೇರಿದಂತೆ ಅಂರ್ತಜಲ ಲಭಿಸುತ್ತದೆಯೋ ಅಲ್ಲಿ ಬೋರ್ವೆಲ್ ಕೊರೆಯಿಸಿ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಬೇಸಿಗೆ ಕಾಲವಾದ ಕಾರಣ ಮೆಸ್ಕಾಂನವರು ಅಗತ್ಯ ಇರುವ ಕಡೆಗಳಲ್ಲಿ ತುರ್ತಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡಬೇಕು, ಹೈ ವೋಲ್ಟೇಜ್ ವಿದ್ಯುತ್ ತಂತಿಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್ ತಂತಿಗಳು ಹಾದು ಹೋಗಿರುವ ಸ್ಥಳಗಳಲ್ಲಿ ಮರಗಳ ರೆಂಬೆ ಕೊಂಬೆಗಳನ್ನು ಕತ್ತರಿಸಬೇಕು, ಇದರಿಂದಲೂ ಬೆಂಕಿ ಅವಘಡಗಳನ್ನು ತಪ್ಪಿಸಬಹುದಾಗಿದೆ, ಅರಣ್ಯ ಇಲಾಖೆಯವರು ಈ ಕಾರ್ಯದಲ್ಲಿ ಸಹಕರಿಸಬೇಕು ಎಂದರು.

ಒಟ್ಟಾರೆ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ನೀರು,  ಅರಣ್ಯದಲ್ಲಿ ಕಾಳ್ಗಿಚ್ಚು, ಮಾನವ-ಪ್ರಾಣಿ ಸಂಘರ್ಷ, ಕುಡಿಯುವ ನೀರು ಕಲುಷಿತ ಆಗದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚೆನ್ನಬಸಪ್ಪ ವೇದಿಕೆಯಲ್ಲಿದ್ದರು. ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಭರತ್ ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top